ಖಾನಾಪುರ, ಕಿತ್ತೂರು, ಬೈಲಹೊಂಗಲ ರೈತರಿಂದ ಹನಿ ನೀರಾವರಿ ಕಾರ್ಯಾದೇಶ ವಿಳಂಬಕ್ಕೆ ಆಕ್ರೋಶ.
ಬೆಳಗಾವಿ:11.12.2025 ರಾಜ್ಯದ ಅತಿ ಹೆಚ್ಚು ತರಕಾರಿ ಉತ್ಪಾದಿಸುವ ಪ್ರದೇಶಗಳಲ್ಲಿ ಒಂದಾದ ಬೆಳಗಾವಿ ಜಿಲ್ಲೆಯ ಖಾನಾಪುರ, ಕಿತ್ತೂರು, ಮತ್ತು ಬೈಲಹೊಂಗಲ ತಾಲ್ಲೂಕುಗಳ ರೈತರಿಗೆ ಸತತ ಎರಡು ವರ್ಷಗಳಿಂದ ಹನಿ ನೀರಾವರಿ ಸೌಲಭ್ಯದ ಕಾರ್ಯಾದೇಶಗಳನ್ನು ನೀಡದಿರುವ ಕುರಿತು ‘ನೇಗಿಲ ಯೋಗಿ ರೈತ ಸೇವಾ ಸಂಘ’ವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ಮೂರೂ ಹಿಂದುಳಿದ ತಾಲ್ಲೂಕುಗಳಲ್ಲಿ ಸುಮಾರು ೧೦,೦೦೦ ರಿಂದ ೧೫,೦೦೦ ಹೆಕ್ಟೇರ್ ಪ್ರದೇಶದಲ್ಲಿ ತರಕಾರಿ ಬೆಳೆಯಲಾಗುತ್ತದೆ. ಇಲ್ಲಿನ ಉತ್ಪನ್ನಗಳು ಹೈದರಾಬಾದ್, ಕೊಲ್ಲಾಪುರ, ಬಾಗಲಕೋಟೆಯಂತಹ ರಾಜ್ಯದ ಹಾಗೂ ಹೊರರಾಜ್ಯದ ಮಾರುಕಟ್ಟೆಗಳಿಗೆ ಮತ್ತು ವಿದೇಶಗಳಿಗೂ ರಫ್ತಾಗುತ್ತವೆ. ಈ ಪ್ರದೇಶದ ರೈತರು ತಮ್ಮ ಜೀವನಕ್ಕಾಗಿ ಸಂಪೂರ್ಣವಾಗಿ ತರಕಾರಿ ಬೆಳೆಯನ್ನೇ ಅವಲಂಬಿಸಿದ್ದಾರೆ.
ಪ್ರತಿ ಎಕರೆಗೆ ₹೪೦,೦೦೦ ದಿಂದ ₹೫೦,೦೦೦ ಖರ್ಚು ಮಾಡಿ, ಡಿಸೆಂಬರ್-ಜನವರಿಯಲ್ಲಿ ತರಕಾರಿ ಸಸಿಗಳನ್ನು ನಾಟಿ ಮಾಡುವ ಹಂತದಲ್ಲಿ, ರೈತರಿಗೆ ನೀರಿನ ಅಭಾವ ಮತ್ತು ಕಾರ್ಮಿಕರ ಕೊರತೆಯು ತೀವ್ರ ಸವಾಲಾಗಿ ಪರಿಣಮಿಸಿದೆ. ಈ ಸಮಸ್ಯೆಗಳಿಗೆ ಹನಿ ನೀರಾವರಿ ಪದ್ಧತಿಯೇ ಪರಿಹಾರವಾಗಿದ್ದು, ಇದರಿಂದ ನೀರಿನ ಉಳಿತಾಯ, ಕಳೆ ನಿಯಂತ್ರಣ ಮತ್ತು ರಸಾವರಿ ಮೂಲಕ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯವಾಗುತ್ತದೆ.
ಆದರೆ, ಸಂಘದ ಅಧ್ಯಕ್ಷ ರವಿ ಪಾಟೀಲ ಹಾಗೂ ಪದಾಧಿಕಾರಿಗಳಾದ ಕಲ್ಲಪ್ಪ ಹರಿಯಾಲ, ಸೋಮನಿಂಗ ಮಳ್ಳಿಕೇರಿ ಮತ್ತು ಮನೋಹರ್ ಸುಳೇಭಾವಿಕರ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ, ೨೦೨೪-೨೫ ಹಾಗೂ ೨೦೨೫-೨೬ನೇ ಸಾಲುಗಳಲ್ಲಿ ಹನಿ ನೀರಾವರಿ ಯೋಜನೆಗೆ ಸಲ್ಲಿಸಿದ ಅರ್ಜಿಗಳಿಗೆ ಯಾವುದೇ ಕಾರ್ಯಾದೇಶ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.
ಜೊತೆಗೆ, ಹೊಸ ತಾಂತ್ರಿಕತೆಗಳು ಮತ್ತು ಪ್ಲಾಸ್ಟಿಕ್ ಹೊದಿಕೆಯಂತಹ ಇತರ ಸೌಲಭ್ಯಗಳನ್ನೂ ನೀಡದೆ ಸರ್ಕಾರವು ಈ ಪ್ರದೇಶದ ರೈತರನ್ನು ಕಡೆಗಣಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಇತ್ತೀಚಿನ ದಿನಗಳಲ್ಲಿ ಚುನಾಯಿತ ಸರ್ಕಾರಗಳು ರೈತ ಮತ್ತು ಬಡ ವರ್ಗದವರನ್ನು ಕಡೆಗಣಿಸುತ್ತಿರುವುದು ಖಂಡನೀಯ,” ಎಂದು ಸಂಘವು ತೀವ್ರ ಎಚ್ಚರಿಕೆ ನೀಡಿದೆ. ತಕ್ಷಣವೇ ನಿಗದಿಪಡಿಸಿದ ಗುರಿಗಳ ಅನ್ವಯ ಕಾರ್ಯಾದೇಶಗಳನ್ನು ನೀಡಿ, ಹೆಚ್ಚಿನ ಅನುದಾನ ಒದಗಿಸಿ ರೈತರನ್ನು ಸಬಲೀಕರಣಗೊಳಿಸಬೇಕು. ಇಲ್ಲವಾದಲ್ಲಿ, “ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ನಿರ್ಣಯಗಳನ್ನು ಕೈಗೊಳ್ಳಬೇಕಾಗುತ್ತದೆ,” ಎಂದು ನೇಗಿಲ ಯೋಗಿ ರೈತ ಸೇವಾ ಸಂಘವು ರಾಜ್ಯ ಸರ್ಕಾರವನ್ನು ಎಚ್ಚರಿಸಿದೆ.
You Might Also Like
ಖಾನಾಪುರ್ ತಾಲೂಕಿನ ನಿಡಗಲ್ ಗ್ರಾಮದ ಮರಾಠ ಸಮುದಾಯದ ಪ್ರೇಮ ವಿವಾಹವಾದ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ನ್ಯಾಯಕ್ಕಾಗಿ ದಂಪತಿಗಳು ದಲಿತ ಸಂಘಟನೆಯ ಮೊರೆ .
ಇಂದು ಖಾನಾಪುರ್ ತಶೀಲ್ದಾರ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ದಲಿತ್ ಸಂಘರ್ಷ ಸಮಿತಿ ಸಂಯೋಜಕ ಸಂಘಟನೆ ವತಿಯಿಂದ ಬಹಿಷ್ಕಾರಕ್ಕೆ ಒಳಗಾದ ಕೀರ್ತಿ. ಬೂತನಾಥ್. ಕದಂ ಅವರ ಎರಡು ಕುಟುಂಬಕ್ಕೆ...
ಇತೀಚಿಗೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ್ ನಮ್ಮ ಅಟೋ ಚಾಲಕರು ಬದುಕುವುದು ತುಂಬಾ ಕಷ್ಟವಾಗಿರುತ್ತದೆ.
ಇತೀಚಿಗೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆಯಿಂದ್ ನಮ್ಮ ಅಟೋ ಚಾಲಕರು ಬದುಕುವುದು ತುಂಬಾ ಕಷ್ಟವಾಗಿರುತ್ತದೆ. * ನಮ್ಮ ಬೇಡಿಕೆಗಳನ್ನು ಪೂರೈಸದೇ ಇದ್ದಲ್ಲಿ 3 ದಿನಗಳಲ್ಲಿ ಅನಿರದಿಷ್ಟವಾದ ಪ್ರತಿಭಟನೆ...
ಎಮಿನೆಂಟ್ ಕೋಚಿಂಗ್ ಕ್ಲಾಸಿನಲ್ಲಿ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರಿಗೆ ಭಕ್ತಿಯ ಗುರು ನಮನ.
ಎಮಿನೆಂಟ್ ಕೋಚಿಂಗ್ ಕ್ಲಾಸ್ ಬೆಳಗಾವಿಯಲ್ಲಿ ಇಂದು ಧ್ಯಾನ ಯೋಗಿ ಜ್ಞಾನ ದಾಸೋಹಿ ನಡೆದಾಡುವ ದೇವರು ಶತಮಾನದ ಸಂತ ಪರಮಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರ ಮೂರನೇ ಪುಣ್ಯ ಸ್ಮರಣೆ ಕಾರ್ಯಕ್ರಮ...
ಮನೆ-ಮನಗಳಿಗೆ ತಲುಪಿದ ‘ಮನೆಗೊಂದು ಗ್ರಂಥಾಲಯ*’
ಬೆಳಗಾವಿಯಲ್ಲಿ ಜಿಲ್ಲಾ ಸಮಿತಿ ರಚನೆ: ಓದು ಸಂಸ್ಕೃತಿ ವಿಸ್ತರಣೆಗೆ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವದ ಹೆಜ್ಜೆ ಬೆಳಗಾವಿ:15,12.2025 ಸಮಾಜದಲ್ಲಿ ಸಂಬಂಧಗಳನ್ನು ಗಟ್ಟಿಗೊಳಿಸಿ, ಜ್ಞಾನ ಮತ್ತು ಪ್ರಜ್ಞೆಯನ್ನು ಹೆಚ್ಚಿಸುವಲ್ಲಿ...
ಸಮಾಜ ಸುಧಾರಣೆಗೆ ಮಠಾಧೀಶರ ಪಾತ್ರ ಮಹತ್ವದ್ದು: ಶಾಸಕ ಬಾಲಚಂದ್ರ ಜಾರಕಿಹೊಳಿ
ಅರಭಾವಿ ಮತಕ್ಷೇತ್ರದ ಮಠಾಧೀಶರ ವೇದಿಕೆ ಉದ್ಘಾಟನೆ; ದುಶ್ಚಟ, ಮೌಢ್ಯತೆ ನಿವಾರಣೆಗೆ ಶ್ರೀಗಳ ಕರೆ ಮೂಡಲಗಿ:14.12.2025 ದೇವರು, ತಾಯಿ-ತಂದೆ, ಪೂಜ್ಯರು ಹಾಗೂ ಜನರ ಸತತ ಆಶೀರ್ವಾದದಿಂದಲೇ ನಾವು ಜಿಲ್ಲೆಯಲ್ಲಿ...





